ಗೋಣಿಕೊಪ್ಪ ವರದಿ, ಅ. 29 : ವೀರಾಜಪೇಟೆ ತಾಲೂಕು ವಕ್ಕಲಿಗರ ಯುವ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ವಕ್ಕಲಿಗರಿಗೆ ಷಟಲ್ ಬ್ಯಾಡ್ಮಿಂಟನ್ ಟೂರ್ನಿ ಆಯೋಜಿಸಿದೆ.ಬಿಟ್ಟಂಗಾಲ ತಂಗಾಳಿ ಒಳಾಂಗಣ ಕ್ರೀಡಾಂಗಣದಲ್ಲಿ ತಾ. 30 ರಿಂದ ನವೆಂಬರ್ 1 ರವರೆಗೆ ನಡೆಯಲಿದೆ. ಮಹಿಳೆಯರು ಹಾಗೂ ಪುರುಷರಿಗೆ ಡಬ್ಬಲ್ಸ್, ಸಿಂಗಲ್ಸ್ ಸ್ಪರ್ಧೆ ನಡೆಯಲಿದೆ ಎಂದು ಯುವ ವೇದಿಕೆ ಪ್ರಕಟಣೆ ತಿಳಿಸಿದೆ.