ಕುಶಾಲನಗರ, ಅ. 30: ಕುಶಾಲನಗರ ಮುಖ್ಯ ರಸ್ತೆ ಬದಿಯಲ್ಲಿ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಹಾಕಿದ ಘಟನೆ ಕುಶಾಲನಗರದಲ್ಲಿ ನಡೆದಿದೆ.

ಇಲ್ಲಿನ ಉದ್ಯಮಿ ವಿ.ಪಿ.ರಾಜಗೋಪಾಲ್ ಎಂಬವರು ತಮ್ಮ ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಕಾರಿನ ಹಿಂಬದಿ ಗಾಜನ್ನು ರಾತ್ರಿ ವೇಳೆ ಕಿಡಿಗೇಡಿಗಳು ರಾಡಿನಿಂದ ಒಡೆದು ಹಾಕಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೆ ಕುಶಾಲನಗರ ಗೌಡ ಸಮಾಜದ ಬಳಿ ಕಾರೊಂದರಿಂದ ಎರಡು ಚಕ್ರಗಳನ್ನು ಕಳವು ಮಾಡಿರುವ ಪ್ರಕರಣ ನಡೆದಿತ್ತು.

ಕುಶಾಲನಗರದಲ್ಲಿ ಇಂತಹ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನಲೆಯಲ್ಲಿ ವಾಹನ ಸವಾರರು ಆತಂಕಕ್ಕೆ ಒಳಗಾಗಿರುವುದು ಕಂಡುಬಂದಿದೆ. ಗಾಜು ಒಡೆದಿರುವ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

ರಾತ್ರಿ ಗಸ್ತು ತಿರುಗುವ ಪೆÇಲೀಸರ ಸಂಖ್ಯೆಯನ್ನು ಹೆಚ್ಚಿಸಿ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮಕೈಗೊಳ್ಳಲು ಸ್ಥಳೀಯ ವಾಹನ ಮಾಲೀಕರು ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.