ಮಡಿಕೇರಿ, ಅ.30 : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಆನ್‍ಲೈನ್ ಮೂಲಕ ಅಗತ್ಯ ದಾಖಾಲಾತಿಗಳೊಂದಿಗೆ ತಿತಿತಿ.ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿಗೆ ನವೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅರ್ಜಿಯನ್ನು ಆನ್‍ಲೈನ್ ಮುಖಾಂತರ ಮಾತ್ರ ಸ್ವೀಕರಿಸಲಾಗುವುದು.

ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರ ಬೇಕು. ನಮೂನೆ-ಜಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.

ನೇರ ಸಾಲ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 3 ಲಕ್ಷಗಳ ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿರಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮತ್ತಿತರ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿಇಟಿ/ಎನ್‍ಇಇಟಿ(ನೀಟ್) ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿಎಚ್‍ಡಿಯಲ್ಲಿ ಪದವಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವ ರಾಗಿರಬೇಕು. ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕಚೇರಿ ವೇಳೆಯಲ್ಲಿ 08272-221656 ದೂರವಾಣಿ ಮುಖಾಂತರ ಸಂಪರ್ಕಿಸಬಹುದು. ಮಹಿಳೆಯರಿಗೆ-ಶೇ.33ರಷ್ಟು ಮತ್ತು ವಿಶೇಷಚೇತನರಿಗೆ-ಶೇ.5ರಷ್ಟು ಮೀಸಲಾತಿ ಇದೆ.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: +91 9448451111, ಇ-ಮೇಲ್: suಠಿಠಿoಡಿಣ. ಞಚಿಛಿಜಛಿ @ಞಚಿಡಿಟಿಚಿಣಚಿಞಚಿ.gov.iಟಿ ಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು ತಿತಿತಿ. ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ತಿಳಿಯಬಹುದಾಗಿದೆ. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್‍ಗೆ ಜೋಡಾಣೆಯಾಗಿರಬೇಕು ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.