ಗೋಣಿಕೊಪ್ಪ ವರದಿ, ಅ. 30: ವೀರಾಜಪೇಟೆ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಭಗಿನಿ ನಿವೇದಿತ ಜಯಂತಿಯನ್ನು ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಸಭಾಂಗಣದಲ್ಲಿ ಆಚರಿಸಲಾಯಿತು.

ಭಗಿನಿ ಸಹೋದರಿ ನಿವೇದಿತಾ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಿ.ಜೆ.ಪಿ. ಹಾಸನ ಜಿಲ್ಲಾ ಉಸ್ತುವಾರಿಯಾಗಿರುವ ಪಟ್ಟಡ ರೀನಾ ಪ್ರಕಾಶ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶರೀನ್ ಸುಬ್ಬಯ್ಯ, ತಾಲೂಕು ಅಧ್ಯಕ್ಷೆ ಮಲ್ಚೀರ ಕವಿತ ಬೋಜಪ್ಪ, ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್‍ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂಞಂಗಡ ಅರುಣ್ ಭೀಮಯ್ಯ, ಉಪಾಧ್ಯಕ್ಷೆ ತೀತಿರ ಊರ್ಮಿಳ, ಅಜ್ಜಿಕುಟ್ಟಿರ ಪ್ರವೀಣ್ ಮುತ್ತಪ್ಪ, ಪ್ರಮುಖರಾದ ಮೇವಡ ವಶ್ಮಾ, ಸುಳ್ಳಿಮಾಡ ಶಿಲ್ಪ, ನೂರೇರ ರತಿ ಇದ್ದರು.