ಕೂಡಿಗೆ, ಅ. 30: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಲಿಂಗಪುರ ಗ್ರಾಮದ ಬಿದರುಕಟ್ಟೆ ರಸ್ತೆಯ ಡಾಂಬರೀಕರಣ ಮತ್ತು ಕೆರೆ ದಡ ಕಾಂಕ್ರಿಟ್ ರಸ್ತೆ ಮತ್ತು ತಡೆಗೋಡೆ ನಿರ್ಮಿಸಲು ತಾಲೂಕು ಪಂಚಾಯಿತಿ ಸಹಾಯಕ ಕಾರ್ಯಪಾಲಕ ಅಭಿಯಂತರ ಇಂಜಿನಿಯರ್ ತಂಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತೊರೆನೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯಲ್ಲಿ ಅನೇಕ ಬಾರಿ ಚರ್ಚೆಗೊಂಡರು ಅನುದಾನದ ಕೊರತೆಯ ನಡುವೆ ಕಾಮಗಾರಿ ನಡೆಯದೆ ತೊಂದರೆಗಳು ಆಗುತ್ತಿದ್ದವು. ಸ್ಥಳೀಯ ಗ್ರಾಮಸ್ಥರು ಸೋಮವಾರಪೇಟೆಗೆ ತೆರಳಿ ಮನವಿಯನ್ನು ಸಲ್ಲಿಸಿದ ಮೇರೆಗೆ ಅಧಿಕಾರಿ ವೀರೇಂದ್ರ ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಕಾಮಗಾರಿಯನ್ನು ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭ ತೊರೆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವರಾಜು, ಸದಸ್ಯ ಪಿ.ಡಿ. ರವಿಕುಮಾರ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.