ಸೋಮವಾರಪೇಟೆ, ಅ.31: ದೇಶದಲ್ಲಿರುವ ದಮನಿತರ ಪರ ಹೋರಾಟ ಮಾಡಿ, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಮ್ಯೂನಿಸ್ಟ್ ಚಳುವಳಿಯನ್ನು ಪರಿಣಾಮಕಾರಿಯಾಗಿ ವಿಸ್ತರಿಸಲು ಪ್ರತಿಯೋರ್ವರೂ ಸಂಘಟಿತರಾU Àಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷದ ಪಾಲಿಟಿ ಬ್ಯೂರೋ ಸದಸ್ಯ ಆರ್. ಮಾನಸಯ್ಯ ಹೇಳಿದರು.
ಭಾರತ ಕಮ್ಯೂನಿಸ್ಟ್ ಪಕ್ಷದ (ಮಾಕ್ರ್ಸ್ವಾದಿ-ಲೆನಿನ್ ವಾದಿ) ರೆಡ್ ಸ್ಟಾರ್ ಜಿಲ್ಲಾ ಸಮಿತಿ ವತಿಯಿಂದ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕಮ್ಯೂನಿಸ್ಟ್ ಚಳುವಳಿಯ 100ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ, ರಾಜ್ಯ ಸಮಿತಿ ಸದಸ್ಯ ಡಿ.ಎಸ್. ನಿರ್ವಾಣಪ್ಪ, ಜಿಲ್ಲಾ ಕಾರ್ಯದರ್ಶಿ ಎಸ್.ಆರ್. ಮಂಜುನಾಥ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪವಿತ್ರ, ವನಜಾಕ್ಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
100ನೇ ವರ್ಷಾಚರಣೆ ಅಂಗವಾಗಿ ವಿವಿಧ ಹಾಡಿಯ ಮಂದಿಯಿಂದ ಕಲಾ ಪ್ರಾಕಾರಗಳ ಪ್ರದರ್ಶನ, ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.