ಮಡಿಕೇರಿ, ಅ. 31: ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ, ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆಯು ಸರಳವಾಗಿ ಯಾವುದೇ ಸಭಾ ಕಾರ್ಯಕ್ರಮವಿಲ್ಲದೆ ಜರುಗಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿನ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಪುóಷ್ಪಾರ್ಚನೆ ಮೂಲಕ ಗಣ್ಯರು ಗೌರವ ನಮನ ಸಲ್ಲಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಡೇಪಂಡ ಪಿ. ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕÀ ಕೊಂಬಾರನ ಜಿ. ಬೋಪಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಪಿ. ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರ್ ಪುದಿಯನೆರವನ ಮಹೇಶ್, ಡಿವೈಎಸ್‍ಪಿ

(ಮೊದಲ ಪುಟದಿಂದ) ಬಾರಿಕೆ ದಿನೇಶ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಸರ್ವೋದಯ ಸಮಿತಿ ಜಿಲ್ಲಾ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ನಗರಸಭೆ ಮಾಜಿ ಅಧ್ಯಕ್ಷೆ ಕೂಡಕಂಡಿ ಕಾವೇರಮ್ಮ ಸೋಮಣ್ಣ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ, ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ, ಗುಡ್ಡೆಮನೆ ರಮೇಶ್, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್, ಕೊಡಗು ಗೌಡ ಮಹಿಳಾ ಒಕ್ಕೂಟ, ಕೊಡಗು ಮಾಜಿ ಸೈನಿಕರ ಒಕ್ಕೂಟ, ಕೊಡಗು ಗೌಡ ನಿವೃತ್ತ ನೌಕರರ ಸಂಘ, ಕುಶಾಲನಗರ, ಚೇರಂಬಾಣೆ ಗೌಡ ಸಮಾಜದ ಪ್ರಮುಖರು, ಇತರರು ಸ್ವಾತಂತ್ರ್ಯ ವೀರ ಸೇನಾನಿ ಗುಡ್ಡೆಮನೆ ಅಪ್ಪಯ್ಯ ಗೌಡ ಅವರಿಗೆ ಗೌರವ ನಮನ ಸಲ್ಲಿಸಿದರು.

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ದಂಬೇಕೋಡಿ ಆನಂದ, ಬೈತಡ್ಕ ಜಾನಕಿ ಬೆಳ್ಯಪ್ಪ, ಸ್ಮಿತಾ ಅಮೃತರಾಜ್, ಪುರುಷೋತ್ತಮ ಕಿರ್ಲಾಯ, ಡಾ.ಪುರುಷೋತ್ತಮ ಕರಂಗಲ್ಲು, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್, ಕುಸುಮಾಧರ್, ಕಿರಣ್ ಕುಂಬಳಚೇರಿ, ಪೌರಾಯುಕ್ತ ಎಸ್.ವಿ.ರಾಮದಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ, ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ಇತರರು ಇದ್ದರು.

ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಕುರಿತು ರಾಜ್ಯ ಶಿಕ್ಷಕಿ ಪ್ರಶಸ್ತಿ ವಿಜೇತರಾದ ಪುದಿಯ ನೆರವನ ರೇವತಿ ರಮೇಶ್ ಮತ್ತು ತಂಡದವರು ನಮನಗೀತೆ ಹಾಡಿದರು.

ಅಕಾಡೆಮಿ ಸದಸ್ಯರಾದ ಧನಂಜಯ ಅಗೋಳಿಕಜೆ ಸ್ವಾಗತಿಸಿ, ನಿರೂಪಿಸಿದರು, ಡಾ.ಕೆ.ಸಿ.ದಯಾನಂದ ವಂದಿಸಿದರು.

ನಂತರ ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರನ್ನು ಗಲ್ಲಿಗೇರಿಸಿದ ನಗರದ ಕೋಟೆ ಆವರಣದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಗುಡ್ಡೆಮನೆ ಕುಟುಂಬದವರು ಹಾಗೂ ಇತರರು ಪುಷ್ಪ ನಮನ ಸಲ್ಲಿಸಿದರು. ಅಕಾಡೆಮಿ ಸದಸ್ಯೆ ಚೊಕ್ಕಾಡಿ ಪ್ರೇಮ ರಾಘವಯ್ಯ ಮತ್ತು ಪಾಂಡನ ಶಾರದ ನಾಗೇಶ್ ಅವರು ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಲಾವಣಿ ಪದ ಹಾಡಿದರು.