ಮಡಿಕೇರಿ, ಅ. 30: ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಸಮೀಪದ ಮೈದಾನದಲ್ಲಿ ಸಿ.ಎನ್.ಸಿ. ವತಿಯಿಂದ ಶಾಂತಿಯುತ ಸತ್ಯಾಗ್ರಹ ನಡೆಯಿತು. ಕೊಡವರಿಗೆ ಬುಡಕಟ್ಟು ಸ್ಥಾನ ಒದಗಿಸುವಂತೆ ಹಾಗೂ ಇತರ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು. ಸಿ.ಎನ್.ಸಿ. ಅಧ್ಯಕ್ಷ ಎನ್.ಯು. ನಾಚಪ್ಪ, ಕಲಿಯಂಡ ಪ್ರಕಾಶ್, ಪುಲ್ಲೇರ ಕಾಳಪ್ಪ, ಬಾಚರಣಿಯಂಡ ಚಿಪ್ಪಣ್ಣ, ಬೊಟ್ಟೋಳಂಡ ಅಕ್ಕಮ್ಮ, ಅಜ್ಜಿಕುಟ್ಟಿರ ಲೋಕೇಶ್ ಮತ್ತಿತರರು ಇದ್ದರು.