ಮಡಿಕೇರಿ, ನ. 2: ಸರ್ಕಾರದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಲಾಗಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆತಾ.ಪಂ.ಅಧ್ಯಕೆÀ್ಷ ತೆಕ್ಕಡೆ ಶೋಭಾ ಮೋಹನ್ ಕುಮಾರ್ ಸೂಚನೆ ನೀಡಿದ್ದಾರೆ. ನಗರದ ತಾ.ಪಂ. ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಳೆಗಾಲ ಮುಗಿಯುತ್ತ ಬಂದಿರುವುದರಿಂದ ಅಭಿವೃದ್ಧಿ ಕಾಮಗಾರಿಗಳು ಚುರುಕುಗೊಳ್ಳಬೇಕು. ಈಗಾಗಲೇ ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನದ ಸದ್ಭಳಕೆಯಾಗಬೇಕು. ಸಾರ್ವಜನಿಕರ ಕುಂದು ಕೊರತೆಯನ್ನು ಅರಿತು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕೃಷಿ ಮತ್ತು ತೋಟಗಾರಿಕಾ ಇಲಾಖೆ ವತಿಯಿಂದ ಇರುವ ಕಾರ್ಯಕ್ರಮಗಳನ್ನು ಸಕಾಲದಲ್ಲಿ ಸಾರ್ವಜನಿಕರಿಗೆ ತಲುಪಿಸುವಂತೆ ಅವರು ಸೂಚಿಸಿದರು.
ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶ್ರೀಧರ್ ಅವರು ಮಾತನಾಡಿ ಮಳೆ ಹಾನಿಯಿಂದಾಗಿ ಜಿಲ್ಲೆಯಲ್ಲಿ ಹಲವಾರು ಕಡೆ ಕುಸಿದಿದ್ದು ತಾತ್ಕಾಲಿಕವಾಗಿ ತೆರವುಗೊಳಿಸಿದ್ದಾರೆ. ಆದರೆ ಆ ಕಾರ್ಯವು ಪೂರ್ಣ ಗೊಂಡಿಲ್ಲ ಹಾಗೂ ರಸ್ತೆಗಳು ಹಾಳಾಗಿದ್ದು ಅದನ್ನು ಕೂಡಲೇ ಸರಿಪಡಿಸಿ ಎಂದರು.
ಈ ಸಂದರ್ಭ ಉತ್ತರಿಸಿದ ಜಿ.ಪಂ.ಎಇಇ. ಶ್ರೀಕಂಠಯ್ಯ ಅವರು ಮಳೆಯ ಕಾರಣ ದುರಸ್ತಿಗೊಂಡ ರಸ್ತೆಗಳ ಕಾಮಗಾರಿಯನ್ನು ಸರಿಪಡಿಸಲು
(ಮೊದಲ ಪುಟದಿಂದ) ಸಾಧ್ಯವಾಗಲಿಲ್ಲ, ಮಳೆಯು ಇದೀಗ ಬಿಡುವು ಕೊಟ್ಟಿದೆ ಕಾಮಗಾರಿಯನ್ನು ಶೀಘ್ರವಾಗಿಯೇ ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಯಾವುದೇ ಶಾಲೆಗಳ ಜಾಗಕ್ಕೆ ಇನ್ನೂ ಕೂಡ ಆರ್ಟಿಸಿ ಆಗಿಲ್ಲ. ಕಂದಾಯಕ್ಕೆ ಒಳಪಟ್ಟಿಲ್ಲ. ಈ ಬಗ್ಗೆ ಗಮನ ಹರಿಸಬೇಕಿದೆ. ಇಲ್ಲವಾದಲ್ಲಿ ಅನುದಾನ ಕಡಿತವಾಗಲಿರುವ ಬಗ್ಗೆ ಶ್ರೀಧರ್ ಗಮನ ಸೆಳೆದರು.
ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ದಯಾನಂದ ಮಾತನಾಡಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಲಾಗುತ್ತಿದೆ ಎಂದು ತಿಳಿಸಿದರು.
ಕೃಷಿ ಇಲಾಖೆಯ ಅಧಿಕಾರಿ ಗಿರೀಶ್ ಮಾತನಾಡಿ ಜಿಲ್ಲೆಯಲ್ಲಿ ಶೇ.97.5ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ತಾ.ಪಂ.ಇಒ ಲಕ್ಷ್ಮಿ ಮಾತನಾಡಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 10 ಉದ್ಯಾನವನ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿಯ ಕಟ್ಟಡವು ಹಳೆಯದಾಗಿರುವುದರಿಂದ ಹೊಸ ಕಟ್ಟಡದ ನಿರ್ಮಾಣವು ಶೀಘ್ರದಲ್ಲಿ ಪ್ರಾರಂಭವಾವಾಗಲಿದೆ ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು. ಜೊತೆಗೆ ಇಲಾಖೆಗಳಲ್ಲಿ ಕನ್ನಡಾನುಷ್ಠಾನ ಸಂಬಂಧ ಚರ್ಚಿಸಲಾಯಿತು.
ತಾ.ಪಂ.ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶೇಖರ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸ್ನೇಹ, ವೈದ್ಯಾಧಿಕಾರಿ ಡಾ.ಚೇತನ್, ಸಹಕಾರ ಇಲಾಖೆಯ ಸಂದೀಪ್ ಇತರರು ಇದ್ದರು.