ಮಡಿಕೇರಿ, ನ. 9: ಅರಕಲಗೂಡು ಮಲ್ಲಿಪಟ್ಟಣದಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ಅವರು ನಿರ್ವಹಿಸಬೇಕಿರುವುದರಿಂದ ತಾ. 11 ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶನಿವಾರಸಂತೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಲಪುರ, ಬಲ್ಲಾರಳ್ಳಿ, ಕಿತ್ತೂರು ಗೌಡಳ್ಳಿ, ನಿಡ್ತ, ಅಂಕನಹಳ್ಳಿ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.