ಮಡಿಕೇರಿ, ನ. 12: ಮೈಸೂರಿನಿಂದ ಉಡುಪಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಇಂದು ಅಪರಾಹ್ನ ಇಲ್ಲಿನ ಮಂಗಳೂರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡಕ್ಕೀಡಾಗಿದೆ. ಆಕಸ್ಮಿಕ ರಸ್ತೆ ಬದಿಗೆ ಎಳೆಯಲ್ಪಟ್ಟಿರುವ ಬಸ್ ಹೆಚ್ಚಿನ ಅಪಾಯದಿಂದ ಪಾರಾಗಿದೆ. ಈ ವೇಳೆ ಒಂದಿಬ್ಬರು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ಇಲ್ಲಿನ ಡಿಪೋ ವ್ಯವಸ್ಥಾಪಕಿ ಗೀತಾ ಅವರು ಖಚಿತಪಡಿಸಿದ್ದಾರೆ.