ಕುಶಾಲನಗರ, ನ. 20: ಕೊಡಗು ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಲಾಯಿತು. ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಕುಶಾಲನಗರದ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಮಡಿಕೇರಿ ವಯರ್‍ಲೆಸ್ ವಿಭಾಗದ ಎಎಸ್‍ಐ ಸುರೇಶ್ ರೈ ಮತ್ತು ಕುಶಾಲನಗರ ಡಿವೈಎಸ್ಪಿ ಕಚೇರಿಯಲ್ಲಿ ಅಪರಾಧ ಪತ್ತೆ ದಳದ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಡ್‍ಕಾನ್ಸ್‍ಟೇಬಲ್ ಟಿ.ಎಸ್.ಸಜಿ ಅವರುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪದಕ ಪ್ರದಾನ ಮಾಡಿದರು. ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಈ ಸಾಧಕರಿಗೆ 2017 ರ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ.