ಮಡಿಕೇರಿ, ನ. 25: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಮಂಗಳವಾರ ವೀರಾಜಪೇಟೆಯ ಸೆಂಟ್ ಆನ್ಸ್ ಸಭಾಂಗಣದಲ್ಲಿ ತರಬೇತಿ ನಡೆಯಿತು.
ಗ್ರಾ.ಪಂ. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸುವ ಬಗ್ಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದರು. ತಹಶೀಲ್ದಾರ್ ನಂದೀಶ್ ಇತರರು ಇದ್ದರು.