ಕೂಡಿಗೆ, ಡಿ. 3: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮದ ಯೋಜನೆಯ ಅಂಗವಾಗಿ ಕೂಡುಮಂಗಳೂರು ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಮಂಜುನಾಥ ಮತ್ತು ಪ್ರವೀಣ್ ಅವರ ನೇತೃತ್ವದಲ್ಲಿ ಬಸವತ್ತೂರು ಗ್ರಾಮದ. ಎಂ.ಟಿ. ಮೂಡ್ಲಿಗೌಡ ಸಭಾಂಗಣದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಹಾಜರಿದ್ದ ಪಕ್ಷದ ಹಿರಿಯ ಮುಖಂಡರು ಪಕ್ಷ ಸಂಘಟನೆಯ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು. ಕುಟುಂಬ ಮಿಲನ ಕಾರ್ಯಕ್ರಮವನ್ನು ಉತ್ಸಾಹಿ ಕಾರ್ಯಕರ್ತರು, ಯುವ ಮುಖಂಡರು ವಿನೂತನ ಕಾರ್ಯಕ್ರಮ ಮಾಡುವ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸುವ ಬಗ್ಗೆ ಸುದೀರ್ಘ ಚರ್ಚೆಗಳು ನಡೆದವು.

ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ತಾಲೂಕು ಬಿಜೆಪಿ ವಕ್ತಾರ ಜೆ.ಜಿ. ಮನು, ಕುಟುಂಬ ಮಿಲನ ಕಾರ್ಯಕ್ರಮ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣಿಪ್ರಸಾದ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್ ಸೇರಿದಂತೆ ತಾಲೂಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,ಕಾರ್ಯಕರ್ತರು ಹಾಜರಿದ್ದರು.