ಮಡಿಕೇರಿ ಡಿ. 6: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಬ್ಲಾಕ್ ವ್ಯಾಪ್ತಿಯಲ್ಲಿ ಪೂರ್ವಸಿದ್ಧತಾ ಸಭೆ ಆಯೋಜಿಸಲಾಗಿದ್ದು ಈ ಸಂಬಂಧ 7ನೇ ಹೊಸಕೋಟೆಯಲ್ಲಿ ಸಭೆ ನಡೆಸಲಾಯಿತು.

ವಲಯ ಅಧ್ಯಕ್ಷ ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಪ್ರಮುಖರು ಚುನಾವಣೆಯ ಪೂರ್ವ ಸಿದ್ಧತೆಯ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಕೆಪಿಸಿಸಿ ವಕ್ತಾರ ಚಂದ್ರಮೌಳಿ, ಕೆಪಿಸಿಸಿ ಸಂಯೋಜಕ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಪ್ರದೀಪ್ ರೈ ಪಂಬಾರು, ಜಿ.ಪಂ ಸದಸ್ಯೆ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸುನೀತಾ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆಯ ಸಂಬಂಧ ಸುಂಟಿಕೊಪ್ಪ ವಲಯದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಪ್ರಮುಖರು ಕಾರ್ಯಕರ್ತರೊಂದಿಗೆ ಚುನಾವಣೆಯ ಬಗ್ಗೆ ಸಮಾಲೋಚಿಸಿದರು.

ಸಭೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್, ಕೆಪಿಸಿಸಿ ಸಂಯೋಜಕ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಪ್ರದೀಪ್ ರೈ ಪಂಬಾರು, ಜಿಲ್ಲಾ ಎಸ್‍ಟಿ ಘಟಕದ ಅಧ್ಯಕ್ಷೆ ಹಾಗೂ ಜಿ.ಪಂ. ಸದಸ್ಯೆ ಪಂಕಜ, ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.