ಮಡಿಕೇರಿ, ಡಿ. 10: ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನೆಲೆ ನಗರದ ಓಂಕಾರೇಶ್ವರ ದೇವಾಲಯದಲ್ಲಿ ಬಿ.ಜೆ.ಪಿ. ನಗರ ಘಟಕದ ವತಿಯಿಂದ ಪೂಜೆ ಸಲ್ಲಿಸಲಾಯಿತು. ಬಿ.ಜೆ.ಪಿ. ನಗರಾಧ್ಯಕ್ಷ ಮನು ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಅಪ್ಪಣ್ಣ, ಉಮೇಶ್ ಸುಬ್ರಮಣಿ, ಜಗದೀಶ್, ಸತೀಶ್, ಮಾಜಿ ನಗರಸಭಾ ಸದಸ್ಯೆ ಅನಿತಾ ಪೂವಯ್ಯ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.