ಶ್ರೀಮಂಗಲ, ಡಿ. 10: ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿಹರ ಗ್ರಾಮದಲ್ಲಿ ಪೌರಾಣಿಕ ಹಿನ್ನೆಲೆಯಿರುವ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಹಬ್ಬಕ್ಕೆ ತಾ. 11 ರಂದು (ಇಂದು) ಕೊಡಿಮರ ನಿಲ್ಲಿಸುವುದರೊಂದಿಗೆ ಚಾಲನೆ ನೀಡಲಾಗುವುದು.

ದಿನಾಂಕ 20 ರಂದು ಷಷ್ಠಿ ಉತ್ಸವ ಹಾಗೂ 21 ರಂದು ದೇವರ ಅವಭೃತ ಸ್ನಾನದೊಂದಿಗೆ ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗುವುದು. ತಾ. 12 ರಿಂದ ಪ್ರತಿನಿತ್ಯ ಹರಕೆ ಬಳಕು, ಅಲಂಕಾರ ಪೂಜೆ, ರುದ್ರಾಭಿಷೇಕ, ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ತಾ. 20 ಹಾಗೂ 21 ರಂದು ತಲೆಮುಡಿ ಹರಕೆ ಒಪ್ಪಿಸಬಹುದು. ಭಕ್ತಾಧಿಗಳು ಕೋವಿಡ್-19ರ ಹಿನ್ನೆಲೆ ಖಡ್ಡಾಯವಾಗಿ ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದು ದೇವಸ್ಥಾನದ ತಕ್ಕಮುಖ್ಯಸ್ಥರು, ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.