ಕುಶಾಲನಗರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಶಾಲನಗರ ಶಾಖೆಯ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಹಿನ್ನೆಲೆ ಕಾರ್ಯಕ್ರಮ ನಡೆಯಿತು. ಕುಶಾಲನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ರಮೇಶ್ ಚಂದ್ರ ಡಾ. ಅಂಬೇಡ್ಕರ್ ಜೀವನ ಚರಿತ್ರೆ ಮತ್ತು ಅವರ ಸಾಧನೆಯ ಮಜಲುಗಳನ್ನು ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿದರು.

ಪ್ರೊ. ಲಿಂಗಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಷತ್‍ನ ನಗರ ಕಾರ್ಯದರ್ಶಿ ರಾಜೇಶ್ ವಿದ್ಯಾರ್ಥಿ ಪರಿಷತ್ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಪರಿಷತ್‍ನ ದರ್ಶನ್ ವಂದಿಸಿದರು.