ಮಡಿಕೇರಿ, ಡಿ. 11: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಪೊನ್ನಂಪೇಟೆಯ ಬೇಗೂರು ಗ್ರಾಮದ ಪೂಳೆಮಾಡ್ ಈಶ್ವರ ಮಂದ್‍ನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಿ.ಎನ್.ಸಿ. ಅಧ್ಯಕ್ಷ ಎನ್.ಯು. ನಾಚಪ್ಪ ಅಧ್ಯಕ್ಷತೆಯಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ 70ಕ್ಕೂ ಅಧಿಕ ಮಂದಿ ಪಾಲ್ಗೊಂಡು ಸಿ.ಎನ್.ಸಿ. ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ನಾಚಪ್ಪ ಮಾತನಾಡಿ, ಕೊಡವ ಬುಡಕಟ್ಟು ಕುಲ ಹಾಗೂ ಭೂ ರಾಜಕೀಯ- ಸ್ವಾಯತ್ತತೆಯ ಕುರಿತು ಮಾಹಿತಿ ನೀಡಿದರು.