ವೀರಾಜಪೇಟೆ, ಡಿ. 12: ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು ಪಕ್ಷ ತನ್ನನ್ನು ಸರಿಯಾಗಿ ನೋಡಿಕೊಂಡಿಲ್ಲ, ನಿಖರ ಕಾರಣ ನೀಡದೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಮಾಜಿ ಸಚಿವ ಜೀವಿಜಯ ಅವರ ನಡೆ ಸರಿಯಲ್ಲ. ಇವರನ್ನು ನಂಬಿದ್ದ ಜೆಡಿಎಸ್‍ನ ಅಸಂಖ್ಯಾತ ಕಾರ್ಯಕರ್ತರು ಹಾಗೂ ನಾಯಕರುಗಳನ್ನು ಅನಾಥ ಮಾಡಿದ್ದಾರೆ. ಇವರ ನಡೆ ನೋವಾಗಿದೆ ಎಂದು ಜೆಡಿಎಸ್ ಮಾಜಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡಿ, ಮಾಜಿ ಸಚಿವ ಬಿ.ಎ. ಜೀವಿಜಯ ಓರ್ವ ರಾಜನೀತಿಜ್ಞ. ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆ ಆದ ಮೇಲೆ ಇವರನ್ನು ನಂಬಿ ಚುನಾವಣೆ ಎದುರಿಸುತ್ತಿರುವ ಅಭ್ಯರ್ಥಿಗಳನ್ನು ಬೀದಿಗೆ ತಂದಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.