ಕೂಡಿಗೆ, ಡಿ. 12: ಕೂಡಿಗೆಯ ದಂಡಿನಮ್ಮ ದೇವಾಲಯದ ಮುಂಭಾಗದಲ್ಲಿರುವ ಕಾಣಿಕೆ ಡಬ್ಬ ಒಡೆದು ಅದರಲ್ಲಿದ್ದ ಕಾಣಿಕೆ ಹಣವನ್ನು ದೋಚಿರುವ ಘಟನೆ ನಡೆದಿದೆ.

ದೇವಾಲಯ ಸಮಿತಿಯ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣಾಧಿಕಾರಿ ಶಿವಶಂಕರ್ ತಂಡದವರು ಸ್ಥಳ ಪರಿಶೀಲನೆ ನಡೆಸಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಇಲ್ಲಿಗೆ ದಾನಿಗಳ ಸಹಕಾರದೊಂದಿಗೆ ಸಿ.ಸಿ. ಟಿವಿಯನ್ನು ಅಳವಡಿಸಲಾಗುವುದು ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಕೆ. ಭೀಮಣ್ಣ ತಿಳಿಸಿದ್ದಾರೆ.