ಸೋಮವಾರಪೇಟೆ, ಡಿ. 12: ಕರ್ನಾಟಕ ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲೂಕು ಘಟಕದ ಕಚೇರಿಯ ಉದ್ಘಾಟನೆ ತಾ. 14 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎಂ. ದಿನೇಶ್ ತಿಳಿಸಿದ್ದಾರೆ.

ಇಲ್ಲಿನ ಸಿ.ಕೆ. ಸುಬ್ಬಯ್ಯ ರಸ್ತೆಯಲ್ಲಿರುವ ವಾಣಿಜ್ಯ ಸಂಕೀರ್ಣದ ಕಟ್ಟಡದಲ್ಲಿ ನೂತನವಾಗಿ ಕಚೇರಿ ತೆರೆಯಲಾಗುತ್ತಿದ್ದು, ಅಂದು ಬೆಳಿಗ್ಗೆ 10.30ಕ್ಕೆ ಕಚೇರಿಯ ಉದ್ಘಾಟನೆ ನೆರವೇರಲಿದೆ ಎಂದು ಮಾಹಿತಿ ನೀಡಿದ್ದಾರೆ.