ಸೋಮವಾರಪೇಟೆ, ಡಿ.12: ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಅಕಸ್ಮಿಕವಾಗಿ ವಿದ್ಯುತ್ ಸ್ಪರ್ಶಗೊಂಡು ಎಲೆಕ್ಟ್ರಿಷಿಯನ್ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಪಟ್ಟಣ ಸಮೀಪದ ಹಾನಗಲ್ ಬಾಣೆ-ಹಾನಗಲ್ ಶೆಟ್ಟಳ್ಳಿ ಗ್ರಾಮದ ನಡುವೆ ಹಾದುಹೋಗಿರುವ ವಿದ್ಯುತ್ ಲೈನ್ ದುರಸ್ತಿ ಕಾರ್ಯ ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ್ದು, ಅಲೇಕಟ್ಟೆ ಗ್ರಾಮದ ಮನೋಹರ ಎಂಬವರ ಪುತ್ರ ಪ್ರಕಾಶ್ ತೀವ್ರ ಗಾಯಗೊಂಡಿದ್ದಾನೆ.

ತಕ್ಷಣ ಗಾಯಾಳು ಪ್ರಕಾಶ್ ನನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಗೆ ಸಾಗಿಸಲಾಗಿದೆ.