ಕುಶಾಲನಗರ, ಡಿ. 20: ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೋತ್ಸವ ಹಿನ್ನೆಲೆ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಸರಳವಾಗಿ ನೆರವೇರಿತು.

ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ಬುಧವಾರದಂದು ಶಾಸ್ತ ಪೂಜೆ, ಅಭಿಷೇಕ ಪೂಜೆ, ನವಕ ಹೋಮ, ಕಲಶ ಪೂಜೆ, ನೈವೇದ್ಯ ನೆರವೇರಿಸಿದ ನಂತರ ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ನಡೆಯಿತು.

ದೇವಾಲಯಕ್ಕೆ ಆಗಮಿಸಿದ್ದ ಭಕ್ತರಿಗೆ ದೇವಾಲಯ ಟ್ರಸ್ಟ್ ವತಿಯಿಂದ ಅನ್ನಪ್ರಸಾದ ವಿತರಣೆ ಮಾಡಲಾಯಿತು. ಮಧ್ಯಾಹ್ನ ಪಾಲ್‍ಕೊಂಬು, ಸಂಜೆ ಉತ್ಸವ ಕಾರ್ಯಕ್ರಮಗಳು ಜರುಗಿದವು. ಅರ್ಚಕರಾದ ವಿಷ್ಣುಮೂರ್ತಿ ಭಟ್, ಕೃಷ್ಣಮೂರ್ತಿ ಭಟ್, ಸೋಮಶೇಖರ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭ ದೇವಾಲಯ ಟ್ರಸ್ಟ್‍ನ ಅಧ್ಯಕ್ಷರಾದ ಗಣಪತಿ, ಪ್ರಮುಖರಾದ ಎಸ್.ಕೆ. ಶ್ರೀನಿವಾಸರಾವ್, ಕೆ.ಆರ್. ಶಿವಾನಂದನ್, ಡಿ.ಆರ್. ಸೋಮಶೇಖರ್, ಮಣಿ, ಪ.ಪಂ. ಸದಸ್ಯರಾದ ಡಿ.ಕೆ. ತಿಮ್ಮಪ್ಪ, ವಿ.ಎಸ್. ಆನಂದಕುಮಾರ್ ಮತ್ತಿತರರು ಇದ್ದರು.