ವೀರಾಜಪೇಟೆ, ಡಿ. ೨೮ : ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈತಾಡಿ ಗ್ರಾಮದಲ್ಲಿ ನಡೆದಿದೆ.

ಮೈತಾಡಿ ಗ್ರಾಮದ ನಿವಾಸಿ ಮಂಜುನಾಥ್ ಎಂಬವರ ಪುತ್ರ ಟಿ.ಎಂ. ಶರತ್ (೨೭) ನೇಣಿಗೆ ಶರಣಾದ ಯುವಕ. ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದ ಶರತ್, ಲಾಕ್‌ಡೌನ್‌ನಿಂದ ಉದ್ಯೋಗ ಕಳೆದುಕೊಂಡು ಸ್ವಗ್ರಾಮಕ್ಕೆ ಆಗಮಿಸಿದ್ದ. ಮೈತಾಡಿ ಗ್ರಾಮದ ಅಜ್ಜಿ ಮನೆಯ ಪಕ್ಕದ ಮನೆಯಲ್ಲಿ ಯುವಕ ವಾಸವಾಗಿದ್ದು, ಕೆಲವು ತಿಂಗಳುಗಳಿAದ ಆಟೋ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆಯಲ್ಲಿ ಯುವಕ ಕುಡಿತದ ಚಟಕ್ಕೆ ದಾಸನಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೆಲಸ ಮುಗಿಸಿ ಸಂಜೆಯ ವೇಳೆಗೆ ಮನೆಗೆ ಬಂದ ಶರತ್, ನೆರೆಮನೆಯ ವರೊಂದಿಗೆ ಕ್ಷÄಲ್ಲಕ ಕಾರಣಕ್ಕೆ ಜಗಳವಾಡಿದ್ದಾನೆ ಎಂದು ತಿಳಿದು ಬಂದಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಂದರ ಮೇಲ್ಛಾವಣಿಯ ಕಬ್ಬಿಣದ ರಾಡ್‌ಗ್ ಸೀರೆ ಬಳಸಿ ನೇಣು ಬಿಗಿದುಕೊಂಡಿದ್ದಾನೆ.

ಮೃತನ ತಂದೆ ಮಂಜುನಾಥ್ ನೀಡಿದ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.