ಶನಿವಾರಸಂತೆ, ಡಿ. ೨೮: ಸಮೀಪದ ಆಲೂರು-ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳೂರಿನ ಖ್ಯಾತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಅವರು ಇಸಿಜಿ ಪರೀಕ್ಷಾ ಉಪಕರಣವನ್ನು ಕೊಡುಗೆಯಾಗಿ ನೀಡಿದರು.

ಡಾ. ಪದ್ಮನಾಭ ಕಾಮತ್ ಕಾರ್ಡಿಯೊಲಾಜಿ ಎಟ್ ಡೋರ್ ಸ್ಟೆಪ್ ಸಿಎಡಿ ಸಮಾಜ ಸೇವಾ ಸಂಸ್ಥೆಯ ಮುಖ್ಯಸ್ಥರಾಗಿದ್ದು, ಸಂಸ್ಥೆ ವತಿಯಿಂದ ಸರ್ಕಾರಿ ಆಸ್ಪತೆಗಳು ಹಾಗೂ ಸಾರ್ವಜನಿಕರಿಗೆ ಸಹಾಯ ಮಾಡುವ ಉದ್ದೇಶದಿಂದ ವಾಟ್ಸಾಪ್ ಗ್ರೂಪ್ ರಚಿಸಿದ್ದಾರೆ.

ಆಲೂರು-ಸಿದ್ದಾಪುರ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್ ಸಿಎಡಿ ಸಂಸ್ಥೆಯ ವಾಟ್ಸಾಪ್ ಗ್ರೂಪ್ ಮೂಲಕ ತಮ್ಮ ಆಸ್ಪತ್ರೆಗೆ ರೋಗಿಗಳನ್ನು ಪರೀಕ್ಷೆ ಮಾಡಲು ಇಸಿಜಿ ಉಪಕರಣದ ಅವಶ್ಯಕತೆ ಇರುವುದಾಗಿ ಮನವಿ ಮಾಡಿಕೊಂಡಿದ್ದರು. ವೈದ್ಯರ ಮನವಿಗೆ ಸ್ಪಂದಿಸಿದ ಸಿಎಡಿ ಸಂಸ್ಥೆ ಇಸಿಜಿ ಉಪಕರಣವನ್ನು ಕೊಡುಗೆಯಾಗಿ ನೀಡಿದೆ.