ಕೂಡಿಗೆ, ಡಿ. ೨೮: ಕೂಡಿಗೆಯಲ್ಲಿರುವ ಕಾರ್ಪೋರೇಷನ್ ಸ್ವಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನೀಡಲಾಗುವ ಎಲ್ಲಾ ರೀತಿಯ ಸ್ವಉದ್ಯೋಗ ತರಬೇತಿಯನ್ನು ಪಡೆದುಕೊಂಡು ಯುವಕ-ಯುವತಿಯರು ಸ್ಥಳೀಯ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯಗಳನ್ನು ಪಡೆದು ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಂಡು ಉತ್ತಮವಾದ ಬದುಕು ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ ಎಂದು ಸಂಸ್ಥೆ ನಿರ್ದೇಶಕ ನಾಗೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕಂಪ್ಯೂಟರ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕುಶಾಲನಗರ ಕಂಪ್ಯೂಟರ್ ಸಂಸ್ಥೆ ಮಾಲೀಕ ಚಂದ್ರಶೇಖರ ತರಬೇತಿಯ ಪ್ರಯೋಜನಗಳನ್ನು ತಿಳಿಸಿದರು. ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.