ಮಡಿಕೇರಿ, ಡಿ. ೩೦: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮತದಾರರ ದಿನಾಚರಣೆ ಪ್ರಯುಕ್ತ ಪಿಯುಸಿ ವಿದ್ಯಾರ್ಥಿಗಳಿಗೆ ಚುನಾವಣೆಗಳಲ್ಲಿ ಮತದಾರರ ಪಾತ್ರ ವಿಷಯದ ಕುರಿತು ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಕಾಟಕೇರಿ ಕೇಶವ ಮತ್ತು ಲೀಲಾವತಿ ಅವರ ಪುತ್ರ ಮದೆ ಮಹೇಶ್ವರ ಸಂಯುಕ್ತ ಪದವಿಪೂರ್ವ ವಿದ್ಯಾಲಯದ ಕೆ. ಕುಶನ್ ಅವರು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ತೆಕ್ಕಡೆ ಗುಲಾಬಿ ಜನಾರ್ಧನ್ ಅವರು ತಿಳಿಸಿದ್ದಾರೆ.