ವೀರಾಜಪೇಟೆ, ಡಿ. ೩೧: ಗ್ರಾಮ ಪಂಚಾಯಿತಿಗಳ ಚುನಾವಣೆಯ ಮತದಾನದ ಎಣಿಕೆಗೆ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯಲ್ಲಿ ವಿಶಾಲವಾದ ಜಾಗವಾಗಿತ್ತು. ಚುನಾವಣೆ ಕಾರ್ಯಕ್ಕೆ ಯಾವುದೇ ತೊಂದರೆಯಾಗಿಲ್ಲ. ಕುಡಿಯುವ ನೀರಿನ ಸಮಸ್ಯೆಯಿಂದ ಕೆಲಕಾಲ ವ್ಯತ್ಯಯ ಉಂಟಾಗಿತ್ತು ಎಂದು ಚುನಾವಣಾಧಿಕಾರಿ ಯೋಗಾನಂದ ತಿಳಿಸಿದ್ದಾರೆ.

ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಪ್ರಧಾನ ಧರ್ಮಗುರು ರೆ.ಫಾ. ಮದಲೈಮುತ್ತು ಈ ಚುನಾವಣೆಗೆ ಸಂಬAಧಿಸಿದAತೆ ಚುನಾವಣಾಧಿಕಾರಿಗಳ ಎಲ್ಲ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಅವರಿಂದ ಯಾವುದೇ ಮೂಲ ಸೌಲಭ್ಯದ ಕೊರತೆಗೆ ಅವಕಾಶವಿರಲಿಲ್ಲ ಎಂದು ಚುನಾವಣಾಧಿಕಾರಿ ಯೋಗಾನಂದ ಅವರು ಇಂದು ‘ಶಕ್ತಿ’ಯಲ್ಲಿ ಪ್ರಕಟಗೊಂಡ ಸುದ್ದಿಗೆ ಪ್ರತಿಕ್ರಿಯೆ ನೀಡಿದ್ದಾರೆ.