‘ಶಕ್ತಿ’ ವರದಿಗೆ ಶಾಸಕರ ಸ್ಪಂದನ

ಕೂಡಿಗೆ, ಡಿ. ೩೧: ತಾ. ೩೦ ರಂದು ಪ್ರಕಟವಾದ ‘ಐದು ವರ್ಷಗಳು ಕಳೆದರೂ ಮುಗಿಯದ ಟರ್ಫ್ ಕಾಮಗಾರಿ’ ವರದಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸ್ಪಂದಿಸಿದ್ದಾರೆ.

ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಕಾಮಗಾರಿಯನ್ನು ಪೂರ್ಣಗೊಳಿಸಿ ಮುಂದಿನ ತಿಂಗಳಲ್ಲಿ ಉದ್ಘಾಟನೆ ನೆರವೇರಿಸುವಂತೆ ಸೂಚನೆ ನೀಡಿದ್ದಾರೆ.

ಶಾಸಕರು ಕೂಡಿಗೆಗೆ ಭೇಟಿ ನೀಡಿದ ಸಂದರ್ಭ ಮಾತನಾಡಿ, ತಾನು ಕ್ರೀಡಾ ಸಚಿವನಾಗಿದ್ದಾಗ ಭೂಮಿಪೂಜೆ ನೆರವೇರಿಸಿ ಕಾಮಗಾರಿಯನ್ನು ಟೆಂಡರ್ ಮೂಲಕ ಗುತ್ತಿಗೆದಾರನಿಗೆ ನೀಡಲಾಗಿತ್ತು. ಅಧಿಕಾರಿಗಳ ಮತ್ತು ಗುತ್ತಿಗೆದಾರರ ಬದಲಾವಣೆಯಿಂದಾಗಿ ವಿಳಂಬವಾಗಿರುವುದರಿAದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ.

ಮುಂದಿನ ದಿನಗಳಲ್ಲಿ ಕ್ರೀಡಾಪಟುಗಳಿಗೆ ಉಪಯುಕ್ತವಾಗುತ್ತದೆ. ಸೋಮವಾರಪೇಟೆ ತಾಲೂಕು ಕೇಂದ್ರದ ಹಾಕಿ ಟರ್ಫ್ ಮೈದಾನದ ಕಾಮಗಾರಿಯನ್ನೂ ಪ್ರಾರಂಭಿಸಲಾಗುವುದು ಎಂದು ಹೇಳಿದರು.