ಸಿದ್ದಾಪುರ, ಜ.೧: ಇತ್ತೀಚೆಗೆ ಕರಡಿಗೋಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಸೇರಿದಂತೆ ಮೂವರಿಗೆ ಚೂರು ಇರಿದು ಗಂಭೀರ ಗಾಯಗೊಳಿಸಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕರಡಿಗೋಡು ಗ್ರಾಮದ ನಿವಾಸಿ ವಿಲ್ಸನ್ ಎಂಬವರ ಮನೆಗೆ ಕ್ಷುಲ್ಲಕ ಕಾರಣಕ್ಕಾಗಿ ರಾತ್ರಿ ಸಮಯದಲ್ಲಿ ನುಗ್ಗಿದ ರಾಮದಾಸ್ (೩೧) ಹಾಗೂ ಆತನ ಸ್ನೇಹಿತರಾದ ಉಣ್ಣಿಕೃಷ್ಣ(೨೯) ಹಾಗೂ ಅಶೋಕ (೨೮) ಈ ಮೂವರು ಸೇರಿ ವಿಲ್ಸನ್ ಹಾಗೂ ಅವರ ಸಂಬAಧಿ ಗಳಾದ ಸ್ಟೀಫನ್ ಹಾಗೂ ಅಪ್ರಾಪ್ತ ಬಾಲಕಿಗೆ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದರು. ನಂತರ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ನಂತರ ಸಿದ್ದಾಪುರ ಪೊಲೀಸರು ತನಿಖೆ ನಡೆಸಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳಾದ ರಾಮ್‌ದಾಸ್, ಉಣ್ಣಿಕೃಷ್ಣ ,ಅಶೋಕನನ್ನು ಬಂಧಿಸಿದ್ದಾರೆ. ಗಾಯಾಳುಗಳು ಮೂವರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.