ಕುಶಾಲನಗರ, ಜ.೪: ಕುಶಾಲನಗರ ಹೋಬಳಿ ವಿಶ್ವಕರ್ಮ ಸಮಾಜದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಆಚರಿಸಲಾಯಿತು. ಕುಶಾಲನಗರದ ವಿಶ್ವಕರ್ಮ ಸಮಾಜದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಮಾಜಿ ಕಾರ್ಯದರ್ಶಿ ಹಾಗೂ ನಿವೃತ್ತ ಪ್ರಾಂಶುಪಾಲ ಎಚ್.ಎನ್. ನಾಗಚಾರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೇವಾಲಯಗಳು ಹಾಗೂ ವಿಗ್ರಹಗಳ ನಿರ್ಮಾಣದಲ್ಲಿ ಶ್ರೇಷ್ಠ ಶಿಲ್ಪಿ ಎನಿಸಿದ ಅಮರಶಿಲ್ಪಿ ಜಕಣಾಚಾರಿ ಕುರಿತು ಮಾಹಿತಿ ನೀಡಿದರು.
ಸಮಾಜದ ಅಧ್ಯಕ್ಷ ಹೆಚ್.ಬಿ ಲಿಂಗಮೂರ್ತಿ ಮಾತನಾಡಿ, ಜಕಣಾಚಾರಿಯವರು ಶಿಲ್ಪಿಗಳ ಲೋಕದಲ್ಲಿ ಅಜರಾಮರರಾಗಿ ಅಮರಶಿಲ್ಪಿ ಜಕಣಾಚಾರಿ ಎಂದು ವಿಶ್ವಮಾನ್ಯರಾಗಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ನಿರ್ದೇಶಕರು ಕುಲಬಾಂಧವರು ಭಾಗವಹಿಸಿದ್ದರು. ಮಹಿಳಾ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.