ಸೋಮವಾರಪೇಟೆ, ಜ. ೬: ಇತ್ತೀಚೆಗೆ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿ ಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದು, ಈ ಆಯ್ಕೆಗೆ ಕಾರಣಕರ್ತರಾದ ಜನತೆಯ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡುವಂತೆ ಗ್ರಾ.ಪಂ. ನೂತನ ಸದಸ್ಯರಿಗೆ ಶಾಸಕ ರಂಜನ್ ಕಿವಿಮಾತು ಹೇಳಿದರು.

ಇಲ್ಲಿನ ಜಾನಕಿ ಕನ್ವೆನ್‌ಷನ್ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ರಾ.ಪಂ. ಸದಸ್ಯರಿಗೆ ಅಭಿನಂದನಾ ಸೋಮವಾರಪೇಟೆ, ಜ. ೬: ಇತ್ತೀಚೆಗೆ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿ ಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದು, ಈ ಆಯ್ಕೆಗೆ ಕಾರಣಕರ್ತರಾದ ಜನತೆಯ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡುವಂತೆ ಗ್ರಾ.ಪಂ. ನೂತನ ಸದಸ್ಯರಿಗೆ ಶಾಸಕ ರಂಜನ್ ಕಿವಿಮಾತು ಹೇಳಿದರು.

ಇಲ್ಲಿನ ಜಾನಕಿ ಕನ್ವೆನ್‌ಷನ್ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ರಾ.ಪಂ. ಸದಸ್ಯರಿಗೆ ಅಭಿನಂದನಾ ಪಡೆದಿದ್ದಾರೆ. ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು ಎಂದರು. ಮಂಡಲ ಅಧ್ಯಕ್ಷ ಮನು ಕುಮಾರ್ ರೈ ಮಾತನಾಡಿ, ಚುನಾಯಿತ ಜನಪ್ರತಿಧಿಗಳು ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು. ವೇದಿಕೆಯಲ್ಲಿ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಮಾಜಿ ಮಂಡಲ ಅಧ್ಯಕ್ಷ ಕೊಮಾರಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್ ಅವರುಗಳು ಉಪಸ್ಥಿತರಿದ್ದರು.

ತಾಲೂಕಿನ ೪೦ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಾಗಿ ಆಯ್ಕೆಯಾದ ಸದಸ್ಯರನ್ನು ಹೂವಿನ ಹಾರ ಹಾಕಿ ಅಭಿನಂದಿಸಲಾಯಿತು. ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅವರ ನೇತೃತ್ವದಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಆಯೋಜಿಸುವದಾಗಿ ರಂಜನ್ ಹೇಳಿದರು.