ಮಡಿಕೇರಿ, ಜ. ೬: ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ೩೧ನೇ ವರ್ಷದ ಮಕರ ಸಂಕ್ರಾAತಿ ಮಹೋತ್ಸವ ತಾ. ೧೪ ರಂದು ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಜರುಗಲಿದೆ.

ಈ ಪ್ರಯುಕ್ತ ಅಂದು ಬೆಳಿಗ್ಗೆ ೬.೩೦ ಕ್ಕೆ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, ೭ ಕ್ಕೆ ಶ್ರೀ ಮುತ್ತಪ್ಪ ಹಾಗೂ ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ, ಬೆಳಿಗ್ಗೆ ೭.೩೦ ರಿಂದ ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ಇತ್ಯಾದಿ ಸೇವೆಗಳು. ಬೆಳಿಗ್ಗೆ ೧೦ ಗಂಟೆಗೆ ಅಲಂಕಾರ ಪೂಜೆ, ಬೆಳಿಗ್ಗೆ ೧೧ ಗಂಟೆಗೆ ಶ್ರೀ ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ (ಬಲಿಪೂಜೆ), ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಂಜೆ ೬ ರಿಂದ ಭಜನೆ, ಸಂಜೆ ೭ ರಿಂದ ಅಲಂಕಾರ ಪೂಜೆ, ಪಡಿಪೂಜೆ, ೮ ಗಂಟೆಗೆ ದೀಪಾರಾಧನೆ, ಪ್ರಸಾದ ವಿತರಣೆ ಜರುಗಲಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.