ಮಡಿಕೇರಿ, ಜ. ೮ : ತಾಲೂಕಿನ ಬಿಳಿಗೇರಿ ಗ್ರಾಮದ ಶ್ರೀ ಅರ್ಧನಾರೀಶ್ವರ ದೇವಾಲಯದಲ್ಲಿ ಕಳೆದ ೩ ದಿನಗಳಿಂದ ನಡೆಯುತ್ತಿದ್ದ ಅಷ್ಟಬಂಧ ದ್ರವ್ಯಕಲಶೋತ್ಸವ ಸಂಪನ್ನಗೊAಡಿತು.

ತಾ.೬ ರಿಂದ ಆರಂಭಗೊAಡ ಕಲಶೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಇಂದು ಬೆಳಗ್ಗೆ ೭ ಗಂಟೆಯಿAದ ಗಣಪತಿ ಹೋಮ, ತತ್ವ ಹೋಮ, ತತ್ವ ಕಲಶ ಪೂಜೆ, ತತ್ವಕಲಶಾಭಿಷೇಕ ಜೊತೆಗೆ ದೇವರಿಗೆ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ದ್ರವ್ಯ ಕಲಶಾಭಿಷೇಕ, ಮಹಾಪೂಜೆ, ಶ್ರೀಭೂತ ಬಲಿ, ಬಲಿ ಉತ್ಸವ, ರಾಜಾಂಗಣ ಪ್ರಸಾದ ಮಂತ್ರಾಕ್ಷತೆ ನಡೆಯಿತು. ದ್ರವ್ಯಕಲಶೋತ್ಸವವನ್ನು ಬ್ಮಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ನೆರವೇರಿಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಭಕ್ತಾರು ಆಗಮಿಸಿ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡರು.