ಸೊಮವಾರಪೇಟೆ, ಜ. ೮: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆಯ ಪ್ರಯುಕ್ತ ಇಲ್ಲಿನ ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ತಾ. ೯ರಂದು(ಇAದು) ೩೪ನೇ ವರ್ಷದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾಟ ನಡೆಯಲಿದೆ.

ಪೂರ್ವಾಹ್ನ ೧೧ ಗಂಟೆಯಿAದ ಇಲ್ಲಿನ ಸಾಕಮ್ಮನ ಬಂಗಲೆಯ ಮೈದಾನದಲ್ಲಿ ಕಬಡ್ಡಿ ಪಂದ್ಯಾಟ ಪ್ರಾರಂಭವಾಗಲಿದ್ದು, ಮೊದಲ ಮೂರು ಸ್ಥಾನಗಳಿಸಿದ ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ನಾಗರಾಜ್ ತಿಳಿಸಿದ್ದಾರೆ.

ಇದರೊಂದಿಗೆ ೧೯ ವರ್ಷದೊಳಗಿನ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟವೂ ನಡೆಯಲಿದ್ದು, ವಿಜೇತರಿಗೆ ನೀಡುವ ಟ್ರೋಫಿಯನ್ನು ಹರಪಳ್ಳಿ ರವೀಂದ್ರ ಅವರು ಅನಾವರಣಗೊಳಿಸಿದ್ದಾರೆ ಎಂದು ನಾಗರಾಜ್ ತಿಳಿಸಿದ್ದಾರೆ.