ಮಡಿಕೇರಿ, ಜ. ೮ : ವೀರಾಜಪೇಟೆ ತಾಲೂಕು, ಅಮ್ಮತ್ತಿ ಬಳಿಯ ಹಾಲುಗುಂದ ಗ್ರಾಮದ ಕಾರ್ಯಪ್ಪ ಅವರಿಗೆ ಸೇರಿದ ಕಾಫಿ ತೋಟದಲ್ಲಿ ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಾಗಳನ್ನಾಗಿ ಮಾಡಿ ಸಾಗಾಟ ಮಾಡಲು ದಾಸ್ತಾನಿರಿಸಿದ್ದನ್ನು ವೀರಾಜಪೇಟೆ ವಲಯ ಅರಣ್ಯಾಧಿಕಾರಿಗಳು ಪತ್ತೆಹಚ್ಚಿ ಮರವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬAಧ ಹೆಚ್.ಕೆ.ಸುಬ್ರಮಣಿ ಎಂಬಾತನ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ. ವೀರಾಜಪೇಟೆ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರೋಶನಿ ಅವರ ಮಾರ್ಗದರ್ಶನದಲ್ಲಿ ವೀರಾಜಪೇಟೆ ಅರಣ್ಯ ವಲಯದ ಉಪ ವಲಯ ಅರಣ್ಯಾಧಿಕಾರಿ ಕಳ್ಳೀರ ದೇವಯ್ಯ ಹಾಗೂ ದೇಯಂಡ ಸಂಜಿತ್ ಸೋಮಯ್ಯ, ಅರಣ್ಯ ರಕ್ಷಕರಾದ ಚಂದ್ರಹಾಸ ಪಟಗಾರ, ಅಮ್ಮತ್ತಿ ಆರ್.ಆರ್.ಟಿ.ತಂಡದ ಸಿಬ್ಬಂದಿಗಳು, ವಾಹನ ಚಾಲಕ ಅಚ್ಚಯ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.