ಮಡಿಕೇರಿ , ಜ. ೯ : ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಕಾನೂನು ಬಾಹಿರವಾಗಿ ನಡೆದುಕೊಂಡಿದೆ. ತಿತಿಮತಿ ಕ್ಷೇತ್ರದ ಫಲಿತಾಂಶವನ್ನು ಪ್ರಶ್ನಿಸಿ ನ್ಯಾಯಾಂಗ ಹೋರಾಟ ಮಾಡಲಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದರು, ಬಿಜೆಪಿ ಪಕ್ಷ ನ್ಯಾಯೋಚಿತ ವಾಗಿ ಚುನಾವಣೆ ಎದುರಿಸಿಲ್ಲ. ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಬಿಜೆಪಿ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎದುರಾಳಿ ಅಭ್ಯರ್ಥಿಗಳ ನಾಮಪತ್ರವನ್ನು ಸಂಚು ರೂಪಿಸಿ ತಿರಸ್ಕಾರ ಮಾಡಿಸಿದೆ.