ಮಡಿಕೇರಿ, ಜ. ೯: ಭಾರತ ಸರ್ಕಾರ, ನೆಹರೂ ಯುವ ಕೇಂದ್ರ ಕೊಡಗು, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ರಾಷ್ಟಿçÃಯ ಸೇವಾ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟಿçÃಯ ಯುವ ಸಂಸತ್ತು ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಕುಶಾಲನಗರದ ಪಿ.ರಜಿನಿ ಮತ್ತು ಎನ್. ಪ್ರದೀಪ್ ಅವರ ಪುತ್ರ ಅಚಲ್ ಪಿ. ಮಯ್ಯ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ತಾ. ೧೨ರಂದು ನವದೆಹಲಿಯ ಭಾರತದ ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಪ್ರಧಾನಮಂತ್ರಿ ಹಾಗೂ ಇತರ ಸಚಿವರ ಸಮ್ಮುಖದಲ್ಲಿ ನಡೆಯುವ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾನೆ.

ಅಚಲ್ ಕೊಡಗು ಜಿಲ್ಲೆಯಿಂದ ಮೊಟ್ಟಮೊದಲ ಬಾರಿಗೆ ಆಯ್ಕೆಯಾದ ವಿದ್ಯಾರ್ಥಿಯಾಗಿದ್ದಾನೆ. ಜಿಲ್ಲಾ ಮಟ್ಟದ ಆಯ್ಕೆಯಲ್ಲಿ ಎಫ್.ಎಂ.ಸಿ. ಕಾಲೇಜಿನ ಡಾ. ಶ್ರೀಧರ್ ಹೆಗ್ಡೆ ಹಾಗೂ ಖುರ್ಷಿದ ಭಾನು ತೀರ್ಪುಗಾರರಾಗಿದ್ದರು.