ಅರೆಭಾಷೆಯಲ್ಲಿ ಚಲನಚಿತ್ರ ನಿರ್ಮಾಣವಾಗಲಿ: ಶಾಸಕ ಅಪ್ಪಚ್ಚು ರಂಜನ್

ಮಡಿಕೇರಿ, ಜ.೧೧: ಕನ್ನಡ ಉಪ ಭಾಷೆಗಳಲ್ಲಿ ಅರೆಭಾಷೆಯು ಒಂದಾಗಿದ್ದು, ಅರೆಭಾಷೆಯನ್ನು ಮತ್ತಷ್ಟು ಪ್ರಚುರ ಪಡಿಸುವ ನಿಟ್ಟಿನಲ್ಲಿ ಅರೆಭಾಷೆಯಲ್ಲಿ ಚಲನಚಿತ್ರ ನಿರ್ಮಾಣ ಮಾಡುವಂತಾಗಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಸಲಹೆ ಮಾಡಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ‘ಸಾಹೇಬ್ರು ಬಂದವೇ!!’ ಅರೆಭಾಷೆ ನಾಟಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಲನಚಿತ್ರ ನಿರ್ಮಾಣದಿಂದ ಅರೆಭಾಷೆ ಬೆಳವಣಿಗೆಗೆ ಸಹಕಾರಿಯಾಗಲಿದೆ. ಸರ್ಕಾರ ಕೂಡ ಚಲನಚಿತ್ರ ನಿರ್ಮಾಣಕ್ಕೆ ಸಹಾಯಧನ ಕಲ್ಪಿಸಲಿದ್ದು, ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಶಾಸಕರು ಹೇಳಿದರು.

ರಾಷ್ಟçದಲ್ಲಿ ಹಲವು ಭಾಷೆಯನ್ನು ಮಾತನಾಡುತ್ತಾರೆ. ಆಯಾಯ ಪ್ರಾಂತೀಯ ಮಾತೃ ಭಾಷೆಗಳನ್ನು ಉಳಿಸಿಕೊಂಡು ಹೋಗುವಂತಾಗಲು ಅರೆಭಾಷೆಯಲ್ಲಿ ಹೊಸ ಹೊಸ ಆವಿಷ್ಕಾರಗಳು ಆಗಬೇಕು ಎಂದು ಮಡಿಕೇರಿ, ಜ.೧೧: ಕನ್ನಡ ಉಪ ಭಾಷೆಗಳಲ್ಲಿ ಅರೆಭಾಷೆಯು ಒಂದಾಗಿದ್ದು, ಅರೆಭಾಷೆಯನ್ನು ಮತ್ತಷ್ಟು ಪ್ರಚುರ ಪಡಿಸುವ ನಿಟ್ಟಿನಲ್ಲಿ ಅರೆಭಾಷೆಯಲ್ಲಿ ಚಲನಚಿತ್ರ ನಿರ್ಮಾಣ ಮಾಡುವಂತಾಗಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಸಲಹೆ ಮಾಡಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ‘ಸಾಹೇಬ್ರು ಬಂದವೇ!!’ ಅರೆಭಾಷೆ ನಾಟಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಲನಚಿತ್ರ ನಿರ್ಮಾಣದಿಂದ ಅರೆಭಾಷೆ ಬೆಳವಣಿಗೆಗೆ ಸಹಕಾರಿಯಾಗಲಿದೆ. ಸರ್ಕಾರ ಕೂಡ ಚಲನಚಿತ್ರ ನಿರ್ಮಾಣಕ್ಕೆ ಸಹಾಯಧನ ಕಲ್ಪಿಸಲಿದ್ದು, ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಶಾಸಕರು ಹೇಳಿದರು.

ರಾಷ್ಟçದಲ್ಲಿ ಹಲವು ಭಾಷೆಯನ್ನು ಮಾತನಾಡುತ್ತಾರೆ. ಆಯಾಯ ಪ್ರಾಂತೀಯ ಮಾತೃ ಭಾಷೆಗಳನ್ನು ಉಳಿಸಿಕೊಂಡು ಹೋಗುವಂತಾಗಲು ಅರೆಭಾಷೆಯಲ್ಲಿ ಹೊಸ ಹೊಸ ಆವಿಷ್ಕಾರಗಳು ಆಗಬೇಕು ಎಂದು ತಿಳಿಸುವಂತಾಗಬೇಕು ಎಂದು ಹೇಳಿದರು.

ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ ಮಾತನಾಡಿ ಅರೆಭಾಷೆ ಬೆಳವಣಿಗೆಗೆ ಗಮಕ, ಸಂಗೀತ, ಯಕ್ಷಗಾನ, ತಾಳಮದ್ದಳೆ, ನಾಟಕ, ಮತ್ತಿತರ ಲಲಿತಾ ಕಲಾ ಪ್ರಕಾರಗಳು ಅತ್ಯಗತ್ಯ ಎಂದು ಪ್ರತಿಪಾದಿಸಿದರು.

ಲಲಿತಾ ಕಲೆಗಳ ಮೂಲಕ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾಧ್ಯ. ಆ ನಿಟ್ಟಿನಲ್ಲಿ ಸಾಹಿತ್ಯ ಮತ್ತು ಲಲಿತ ಕಲೆಗಳು ಒಂದಕ್ಕೊAದು ಕೊಂಡಿಯಾಗಿ ಅರೆಭಾಷೆ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.

ಸಾಹೇಬ್ರು ಬಂದವೇ ನಾಟಕ ನಿರ್ದೇಶಕ ಜೀವನ್‌ರಾಂ ಸುಳ್ಯ ಮಾತನಾಡಿ ಅರೆಭಾಷೆಯನ್ನು ಸುಳ್ಯ ತಾಲೂಕಿನಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಹೀಗೆ ಎಲ್ಲರೂ ಮಾತನಾಡುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅರೆಭಾಷೆಯನ್ನು ನಾಟಕ ಹಾಗೂ ರಂಗ ಮಾಧ್ಯಮದ ಮೂಲಕ ತಲುಪಿಸಲು ಪ್ರಯತ್ನಿಸಲಾಗುತ್ತಿದೆ. ರಂಗಭೂಮಿಯಲ್ಲಿ ಚಲನಶೀಲತೆ ಕಾಣಬಹುದಾಗಿದೆ. ಎಲ್ಲಾ ಉಪ ಭಾಷೆಗಳಿಗೂ ಕನ್ನಡವೇ ಮೂಲ ಭಾಷೆಯಾಗಿದೆ. ಪ್ರತಿಯೊಂದು ಭಾಷೆಗೂ ಮೂಲ ಕನ್ನಡ ಭಾಷೆ ಎಂಬುದನ್ನು ಮರೆಯುವಂತಿಲ್ಲ ಎಂದರು. ಅರೆಭಾಷೆ ಗಡಿಯನ್ನು ಮೀರಿ ಬೆಳೆಯುತ್ತಿದೆ. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.

ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಮಾತನಾಡಿ ಭಾಷೆಯನ್ನು ಉಳಿಸಿಕೊಂಡು ಹೋದಲ್ಲಿ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಅಕಾಡೆಮಿಯಿಂದ ನಡೆಯುವ ಕಾರ್ಯಕ್ರಮಗಳು ದಾಖಲೀಕರಣವಾಗುವಂತಾಗಬೇಕು ಎಂದು ಸಲಹೆ ಮಾಡಿದರು.

ಸಂತ ಜೋಸೆಫರ ಶಾಲೆಯ ಸಂಚಾಲಕಿ ಸಿಸ್ಟರ್ ಆಂಥೋನಿಯಮ್ಮ ಮಾತನಾಡಿ ಭಾಷೆ ಕಲಿಯುವುದರಿಂದ ಹೆಚ್ಚಿನ ಜ್ಞಾನವನ್ನು ಸಂಪಾದಿಸಬಹುದು. ಆ ನಿಟ್ಟಿನಲ್ಲಿ ಅರೆಭಾಷೆಯನ್ನು ಕಲಿಯುವಂತಾಗಬೇಕು ಎಂದು ಹೇಳಿದರು.

ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಮಾತನಾಡಿದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಪಾರ್ವತಿ ಅಪ್ಪಯ್ಯ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಸಾಗರ್, ಇತರರು ಇದ್ದರು. ರಿಜಿಸ್ಟಾçರ್ ಚಿನ್ನಸ್ವಾಮಿ ಸ್ವಾಗತಿಸಿದರು. ಅಕಾಡೆಮಿ ಸದಸ್ಯ ಕೆ.ಸಿ.ದಯಾನಂದ ನಿರೂಪಿಸಿದರು, ಮನುಜ ನೇಹಿಗ ಪ್ರಾರ್ಥಿಸಿದರು. ಸದಸ್ಯ ಧನಂಜಯ ಅಗೋಳಿಕಜೆ ವಂದಿಸಿದರು.