ಸುAಟಿಕೊಪ್ಪ,ಜ.೨೧ : ಕಾರು ಚಾಲಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಸಮೀಪದ ಕಾನ್‌ಬೈಲು ಗ್ರಾಮದ ಪೂವಯ್ಯ ಕಾಲೋನಿಯಲ್ಲಿ ನಡೆದಿದೆ.

ಸುಂಟಿಕೊಪ್ಪದ ಕಾರು ಚಾಲಕ ಬಿ.ಎಂ. ಸುನೀಲ್ ತಾ. ೨೦ರ ರಾತ್ರಿ ೮.೩೦ರ ಸಮಯದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಪೂವಯ್ಯ ಕಾಲೋನಿಗೆ ತೆರಳಿದ್ದು ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿದ ಸಂದರ್ಭ ನಾಲ್ಕೆöÊದು ಮಂದಿ ಕಾರಿನ ಬಾನೆಟ್ ಮೇಲೆ ಕುಳಿತ್ತಿರುವುದನ್ನು ಪ್ರಶ್ನೆ ಮಾಡಿದ ಸಂದರ್ಭ ಸುನೀಲ್ ಮೇಲೆ ಏಕಾಏಕಿ ಕಲ್ಲು ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಸುನೀಲ್ ಅವರನ್ನು ಸ್ಥಳೀಯರು ಮಡಿಕೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ಸಂದರ್ಭ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಕೈಯಲ್ಲಿದ್ದ ವಾಚ್ ಕಾಣೆಯಾಗಿದೆ ಎಂದು ಪೊಲೀಸ್ ವಿಚಾರಣೆ ಸಂದರ್ಭ ಸುನೀಲ್ ದೂರು ನೀಡಿದ್ದಾರೆ. ಹಲ್ಲೆ ನಡೆಸಿದ ಮೊಳೂರು ಗ್ರಾಮದ ಸಚಿನ್, ಮನೋಜ್, ಯತೀಶ್ ಎಂಬವರುಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದು ಉಳಿದವರಿಗೆ ಬಲೆ ಬೀಸಿದ್ದಾರೆ.