ಕುಶಾಲನಗರ, ಜ. ೨೧: ಕುಶಾಲನಗರದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೧೫೮ನೇ ಜಯಂತಿ ಅಂಗವಾಗಿ ವಿವೇಕ ಭಾರತ-ವಿಚಾರ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕುಶಾಲನಗರದ ಮಾರುತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಎಬಿವಿಪಿ ಜಿಲ್ಲಾ ಪ್ರಮುಖ ರಮೇಶ್‌ಚಂದ್ರ ಉದ್ಘಾಟಿಸಿದರು.

ಸಾಮಾಜಿಕ ಕಾರ್ಯಕರ್ತ ಧನಂಜಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಎಬಿವಿಪಿ ಜಿಲ್ಲಾ ಸಂಘಟನಾ ಸಂಚಾಲಕ ವೀರೇಶ್ ಅಜ್ಜಣ್ಣನವರ್ ಪ್ರಾಸ್ತಾವಿಕ ನುಡಿಗಳಾಡಿ ದರು.ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವೇದಿಕೆ ಸಭಾಂಗಣದವರೆಗೆ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ೪೦೦ ಮೀ ಉದ್ದದ ತಿರಂಗ ಹಿಡಿದು ಸಾಗಿದ ನೂರಾರು ವಿದ್ಯಾರ್ಥಿಗಳು ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಕುಶಾಲನಗರದ ಬಿಜೆಪಿ ಹಿರಿಯ ಮುಖಂಡ ಜಿ.ಎಲ್.ನಾಗರಾಜ್ ಮೆರವಣಿಗೆಗೆ ಚಾಲನೆ ನೀಡಿದರು.ಈ ಸಂದರ್ಭ ಎಬಿವಿಪಿ ನಗರ ಘಟಕದ ಕಾರ್ಯ ದರ್ಶಿ ರಾಜೇಶ್, ಪ್ರಮುಖರಾದ ನವನೀತ್, ತನ್ಮಯ್, ಸಿಂಚನಾ, ಸುಪ್ರಿಯ, ದೀಪಿಕ, ಪ್ರಿಯಾಂಕ, ರೇವತಿ, ಪುಷ್ಪ ಮತ್ತಿತರರು ಇದ್ದರು.