ಬೆಂಗಳೂರು, ಫೆ. ೧೦: ಮರಳು ಗಣಿಗಾರಿಕೆ ನಿಯಮಗಳನ್ನ ಸರಳಗೊಳಿಸಲಾಗಿದ್ದು ಇನ್ನು ಮುಂದೆ ಮರಳು ಸುಲಭವಾಗಿ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಹಾಗೂ ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೧ ರ ನೂತನ ಗಣಿ ನೀತಿ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದರು.ಹಳ್ಳ, ಕೊಳ್ಳಗಳಲ್ಲಿ ಸಿಗುವ ಉಸುಕು ಬಳಕೆಗೆ ಅವಕಾಶ ಮಾಡಿಕೊಡಲಾಗುವುದು, ಎತ್ತಿನಗಾಡಿ, ಟ್ರ‍್ಯಾಕ್ಟರ್ ಗಳಲ್ಲಿ ಮರಳು ತರಲು ಅವಕಾಶ ನೀಡಲಾಗುವುದು, ಇದುವರೆಗೆ ಎಲ್ಲದಕ್ಕೂ ನಿರ್ಬಂಧ ಹೇರಲಾಗಿತ್ತು. ಇದರಿಂದ ಸಣ್ಣ ರೈತರು, ಜನಸಾಮಾನ್ಯರಿಗೆ ಮರಳು ಸಿಗುತ್ತಿರಲಿಲ್ಲ. ಗ್ರಾಮೀಣ ಭಾಗದಲ್ಲಿ ಆಶ್ರಯ ಮನೆಗಳಿಗೂ ಮರಳು ಸಿಗುತ್ತಿರಲಿಲ್ಲ. ಆದರೆ ಇದೀಗ ಸುಲಭವಾಗಿ ಬಳಸಿಕೊಳ್ಳಲು ಅವಕಾಶ ಮಾಡಿಕೊಡುತ್ತೇವೆ ಎಂದು ತಿಳಿಸಿದರು.

ಮಹಾರಾಷ್ಟçದಲ್ಲಿ ಗಾಡಿ, ಬೈಕ್,ಕತ್ತೆಗಳಲ್ಲಿ ಮರಳು ಸಾಗಿಸಿದರೂ ಎಫ್ ಐಆರ್ ಹಾಕುತ್ತಾರೆ. ಆದರೆ ಇಲ್ಲಿ ಅಂತವುಗಳಿಗೆ ಅವಕಾಶ ನೀಡಬಾರದೆಂದು ಚಿಂತನೆ ನಡೆಸಲಾಗಿದೆ. ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಗಣಿ ನೀತಿಗಳನ್ನಸರಳೀಕರಣಗೊಳಿಸುತ್ತೇವೆ ಎಂದು ಮಾಹಿತಿ ನೀಡಿದರು.ಗಣಿಗಾರಿಕೆಯಿಂದ ಪ್ರಸ್ತುತ ೩೭೦೦ ಕೋಟಿ ರಾಜಸ್ವ ಧನ ಬರುತ್ತಿದೆ, ಆದಾಯವನ್ನು ಮತ್ತಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಕಡಿಮೆ ದರದಲ್ಲಿ ಎಲ್ಲರಿಗೆ ಲಭ್ಯವಾಗುವಂತೆ ಮಾಡುತ್ತೇವೆ ಎಂದರು. ಈ ನಿಟ್ಟಿನಲ್ಲಿ ಹೊಸ ಮರಳು ನೀತಿ ಶೀಘ್ರದಲ್ಲೇ ಜಾರಿಗೆ ತರುತ್ತೇವೆ, ಪ್ರಸ್ತುತ ಮೂರು ಕಮಿಟಿ ರಚಿಸಿದ್ದೇವೆ, ಆಂಧ್ರಕ್ಕೆ ಇಂದು ಒಂದು ಸಮಿತಿ ಹೋಗಿದ್ದು ಅಲ್ಲಿನ ನೀತಿಯ ಬಗ್ಗೆ ಅಧ್ಯಯನ ಮಾಡಲಿದೆ ಹಾಗೂ ಈ ಬಗ್ಗೆ ವರದಿ ನೀಡಲಿದೆ ಎಂದು ಮಾಹಿತಿ ನೀಡಿದರು.

ಸುಲಭವಾಗಿ ಎಲ್ಲರಿಗೂ ಮರಳು ಸಿಗಬೇಕು ಆದರೆ ನೈಸರ್ಗಿಕವಾಗಿಯೂ ಅಪಾಯ ಆಗಬಾರದು. ಟೆಕ್ನಿಕಲಿ ಹೇಗೆ ಮಾಡಬಹುದು ಎಂಬ ಬಗ್ಗೆ ನಿಯಮ ರೂಪಿಸಿ ವೈಜ್ಞಾನಿಕವಾಗಿ ಮರಳು ತೆಗೆಯುವ ಬಗ್ಗೆ ನೂತನ ನೀತಿಯಲ್ಲಿ ಜಾರಿಗೆ ಬರಲಿದೆ. ಎಷ್ಟು ಮರಳು ತೆಗೆಯಬಹುದು, ಮರಳು,