ಮಡಿಕೇರಿ, ಫೆ. ೧೩: ರೂ. ೧ ಕೋಟಿ ವೆಚ್ಚದ ನಗರದ ಸಿದ್ದಾಪುರ ರಸ್ತೆಯ ಉಕ್ಕುಡ ಮಾರಿಯಮ್ಮ ದೇವಾಲಯದಿಂದ ೨ ಕಿ.ಮೀ ರಸ್ತೆ ಕಾಮಗಾರಿಗೆ ಶಾಸಕ ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ರಸ್ತೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ವಿನಿಯೋಗಿಸುತ್ತಿದೆ. ಜಿಲ್ಲೆಯ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಚೆಟ್ಟಳ್ಳಿ ರಸ್ತೆ ಅಭಿವೃದ್ಧಿಗೆ ರೂ. ೧ ಕೋಟಿ ಬಿಡುಗಡೆ ಆಗಿದೆ. ಸಾರ್ವಜನಿಕರಿಗೆ ಇದು ಸದ್ಭಳಕೆಯಾಗಲಿದೆ ಎಂದರು.

ಜಿ.ಪಂ. ಅಧ್ಯಕ್ಷ ಬಿ.ಎ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಬಿ.ಜೆ.ಪಿ ತಾಲೂಕು ಅಧ್ಯಕ್ಷ ಕಾಂಗೀರ ಸತೀಶ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರಾಧ್ಯಕ್ಷ ಮನು ಮಂಜುನಾಥ್, ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಅರುಣ್ ಕುಮಾರ್, ಉಮೇಶ್ ಸುಬ್ರಮಣಿ, ಮುರುಗನ್ ಸೇರಿದಂತೆ ಇನ್ನಿತರರು ಇದ್ದರು.