ವೀರಾಜಪೇಟೆ, ಫೆ. ೧೬: ವೀರಾಜಪೇಟೆಗೆ ಸಮೀಪದ ಅರಮೇರಿಯ ಎಸ್.ಎಂ. ಎಸ್. ವಿದ್ಯಾಸಂಸ್ಥೆಗಳ ಆವರಣದಲ್ಲಿ ಸುಮಾರು ರೂ. ೯ ಕೋಟಿ ವೆಚ್ಚದಲ್ಲಿ ಕರ್ನಾಟಕ ಕಾವೇರಿ ನೀರಾವರಿ ಅಭಿವೃದ್ದಿ ನಿಗಮದಿಂದ ತಡೆಗೋಡೆ ನಿರ್ಮಾಣಕ್ಕೆ ಭೂಮಿಪೂಜೆ ನಡೆಯಿತು.

ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯ ಶಶಿ ಸುಬ್ರಮಣಿ, ತಾಲೂಕು ಪಂಚಾಯಿತಿ ಸದಸ್ಯೆ ಎ.ಪಿ. ಸೀತಮ್ಮ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳ ದಿವ್ಯ ಸಾನಿದ್ಯದಲ್ಲಿ ಕಾರ್ಯಕ್ರಮ ನಡೆಯಿತು. ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಸಹಾಯಕ ಅಭಿಯಂತರ ನವೀನ್, ರಾಮಚಂದ್ರಪ್ಪ ಹಾಗೂ ಪ್ರಭು ಉಪಸ್ಥಿತರಿದ್ದರು.