ಮಡಿಕೇರಿ, ಫೆ. ೧೭: ಕಾವೇರಿ ಕಾಲೇಜು, ಗೋಣಿಕೊಪ್ಪಲು, ಎನ್.ಸಿ.ಸಿ ಘಟಕ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಡಿಕೇರಿ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಾಗಾರ ತಾ. ೧೮ ರಂದು ನಡೆಯಲಿದೆ.

ಜಿಲ್ಲಾ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ನೂರುನ್ನೀಸಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಪದವಿ ಪ್ರಾಂಶುಪಾಲ ಪ್ರೊ.ಕುಸುಮಾದರ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಎಸ್. ಮಾದಯ್ಯ, ಎನ್.ಸಿ.ಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಅಕ್ರಂ, ಲೇಪಾಕ್ಷಿ ಪಾಲ್ಗೊಳ್ಳಲಿದ್ದಾರೆ.