ಸಿದ್ದಾಪುರ, ಫೆ. ೧೯: ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಮಾಲ್ದಾರೆ ಪಟ್ಟಣದಿಂದ ಅಸ್ತಾನದ ಸಂಪರ್ಕ ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿಯಲ್ಲಿ ಮಂಜೂರಾದ ರೂ. ೯೮ ಲಕ್ಷ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು. ರೂ. ೨೫ ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದರು.

ಈ ಸಂದರ್ಭ ಗ್ರಾ.ಪಂ. ಸದಸ್ಯ ಕುಂಞಣ್ಣ ಮಾತನಾಡಿ, ಮಾಲ್ದಾರೆಯಿಂದ ಅಸ್ತಾನದ ಮೂಲಕ ಅವರೆಗುಂದಕ್ಕೆ ತೆರಳುವ ರಸ್ತೆಯು ತೀವ್ರವಾಗಿ ಹದಗೆಟ್ಟಿತ್ತು. ಇದೀಗ ಶಾಸಕ ಕೆ.ಜಿ. ಬೋಪಯ್ಯ ಅವರ ಪ್ರಯತ್ನದಿಂದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಿರುವುದು ಗ್ರಾಮಸ್ಥರ ಬೇಡಿಕೆ ಈಡೇರಿದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಮಾಲ್ದಾರೆ ಗ್ರಾ.ಪಂ. ಅಧ್ಯಕ್ಷ ಸಮೀರ್, ಗ್ರಾ.ಪಂ. ಸದಸ್ಯರುಗಳಾದ ಸರಸ್ವತಿ, ಚಂದ್ರ, ಸೋಮಯ್ಯ, ಶೋಭ ಹಾಗೂ ಬಿಜೆಪಿ ಪಕ್ಷದ ಪ್ರಮುಖರಾದ ಅಜ್ಜಿನಿಕಂಡ ರಘು ಕರುಂಬಯ್ಯ, ಜೋಸೆಫ್, ಸೂದನ ಯತೀಶ್, ಬಿ.ಕೆ. ಅನಿಲ್ ಶೆಟ್ಟಿ, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ, ನರಸಂಹ, ಇನ್ನಿತರರು ಹಾಜರಿದ್ದರು.