ಕುಶಾಲನಗರ, ಫೆ. ೨೦: ಕುಶಾಲನಗರದ ಕಾವೇರಿ ಯುವಕ ಸಂಘ ಹಾಗೂ ಕ್ರಿಕೆಟ್ ಅಕಾಡೆಮಿ ಆಶ್ರಯದಲ್ಲಿ ೧೦ನೇ ವರ್ಷದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಅನೀಶ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಶಿವರಾತ್ರಿ ಪ್ರಯುಕ್ತ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಮಾರ್ಚ್ ೧೧, ೧೨, ೧೩ ರಂದು ಮೂರು ದಿನಗಳ ಕಾಲ ಕಾವೇರಿ ಪ್ರೀಮಿಯರ್ ಲೀಗ್ ಪಂದ್ಯಾಟ ನಡೆಯಲಿದೆ. ಐಪಿಎಲ್ ಮಾದರಿಯಲ್ಲಿ ಆಟಗಾರರನ್ನು ಬಿಡ್ಡಿಂಗ್ ಮೂಲಕ ಆಯ್ಕೆ ಮಾಡಲಾಗುತ್ತದೆ. ಪ್ರಥಮ ಬಹುಮಾನ ೧,೪೯,೯೯೯, ದ್ವಿತೀಯ ಬಹುಮಾನ ೭೪,೯೯೯, ತೃತೀಯ ಬಹುಮಾನ ೨೪,೯೯೯ ಹಾಗೂ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಪ್ರದೀಪ್, ಸಂತೋಷ್, ಸಂಘಟನಾ ಕಾರ್ಯದರ್ಶಿ ಶಿವಸ್ವಾಮಿ, ದಯಾನಂದ್, ಸಂತೋಷ್ ಕ್ಲೆಮಿಂಟನ್ ಇದ್ದರು.