ಸೋಮವಾರಪೇಟೆ, ಫೆ. ೨೧: ಸಮೀಪದ ಅಂಕನಳ್ಳಿ ತಪೋವನ ಕ್ಷೇತ್ರ ಮನೆಹಳ್ಳಿ ಮಠದಲ್ಲಿ ರಥಸಪ್ತಮಿ ಹಾಗೂ ತಪೋವನೇಶ್ವರಿ ದೇವಿಯ ವರ್ದಂತಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಠದಲ್ಲಿ ಕ್ಷೇತ್ರದೇವ ವೀರಭದ್ರ ಸ್ವಾಮಿ, ಜೇನುಕಲ್ಲು ಸಿದ್ದೇಶ್ವರ (ಅಜ್ಜಯ್ಯ) ಸನ್ನಿಧಿಯಲ್ಲಿ ರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ ನಡೆಯಿತು. ಮಹಿಳೆಯರು ತಪೋವನೇಶ್ವರಿ ದೇವಿಗೆ ಸೀರೆ, ಮಡಿಲು ಅಕ್ಕಿ ಸಮರ್ಪಿಸಿದರು. ಮನೆಹಳ್ಳಿ ಮಠಾಧೀಶರಾದ ಮಹಾಂತ ಶಿವಲಿಂಗ ಸ್ವಾಮೀಜಿ, ಬಸವಾಪಟ್ಟಣ ತೋಟಂದಾರ್ಯ ಸಂಸ್ಥಾನ ಮಠಾಧೀಶರಾದ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಶಿಡಿಗಳಲೆ ಮಠಾಧೀಶರಾದ ಇಮ್ಮಡಿ ಶಿವಲಿಂಗ ಸ್ವಾಮೀಜಿ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.