ನಾಪೋಕ್ಲು, ಫೆ. ೨೧: ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿಗೆ ಒಳಪಟ್ಟ ಅಮ್ಮಂಗೇರಿ ಕಣಿಯರ ಕುಟುಂಬಸ್ಥ್ತರ ಮನೆಗೆ ತೆರಳುವ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭ ಪಾಡಿ ಶ್ರೀ ಇಗ್ಗುತ್ತಪ್ಪ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ, ಕಣಿಯರ ನಾಣಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಪಂಚಾಯಿತಿ ಮಾಜಿ ಸದಸ್ಯರು, ಗ್ರಾಮಸ್ಥರು ಇದ್ದರು.